ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
Cross references
ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.