ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
Cross references
ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.