ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
Cross references
ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).