ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.
Cross references
ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.
ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.