ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
Cross references
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.