ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
Cross references
ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.