ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
Cross references
ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.