ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
Cross references
ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.