ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
Cross references
ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ