ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
Cross references
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.