ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
Cross references
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.