ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
Cross references
ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.
ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.
ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.