ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
Cross references
ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.
ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.