ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
Cross references
ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು