ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
Cross references
ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--
ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.