ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
Cross references
ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ