ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
Cross references
ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.