ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
Cross references
ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.