ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
Cross references
ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.