ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
Cross references
ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.
ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.