ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
Cross references
ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.