ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
Cross references
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.
ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.