Home Bibles 2 ಅರಸುಗಳು 5:20 · ಕನ್ನಡ ಬೈಬಲ್
2 ಅರಸುಗಳು 5:20 · ಕನ್ನಡ ಬೈಬಲ್

ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.

Cross references

ನಿರ್ಗಮಕಾಂಡ 20:7

ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.

ನಿರ್ಗಮಕಾಂಡ 20:17

ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.

1 ಸಮುವೇಲ 14:39

ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.

2 ಅರಸುಗಳು 4:12

ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.

2 ಅರಸುಗಳು 4:25

ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.

2 ಅರಸುಗಳು 4:31

ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.

2 ಅರಸುಗಳು 4:36

ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.

2 ಅರಸುಗಳು 6:31

ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.

ಕೀರ್ತನೆಗಳು 10:3

ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.

ಸಾಮೇತಿಗಳು 26:16

ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.

ಯೆಶಾಯ 48:1

ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಯೆರೆಮಿಯ 22:17

ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

ಹಬಕ್ಕೂಕ 2:9

ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!

ಮತ್ತಾಯ 10:4

ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.

ಮತ್ತಾಯ 26:9

ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.

ಲೂಕ 12:15

ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

ಲೂಕ 16:8

ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.

ಯೋಹಾನ 6:70

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್‌ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.

ಯೋಹಾನ 12:5

ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.

ಯೋಹಾನ 13:2

ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.

ಅಪೋಸ್ತಲರ ಕೃತ್ಯಗಳು 5:2

ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.

ಅಪೋಸ್ತಲರ ಕೃತ್ಯಗಳು 8:18

ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--

1 ತಿಮೋಥೆಯ 6:9

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

2 ತಿಮೋಥೆಯ 4:10

ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

ತೀತ 1:7

ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ

1 ಪೇತ್ರ 5:2

ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

2 ಪೇತ್ರ 2:14

ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

Interlinear

Choose Theme