ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
Cross references
ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.