ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
Cross references
ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.