ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
Cross references
ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.