ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
Cross references
ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
ಆದರೆ ಅರಾಮ್ಯರಿಗೂ ಇಸ್ರಾಯೇಲ್ಯ ರಿಗೂ ಮೂರು ವರುಷ ಯುದ್ಧವಿಲ್ಲದೆ ಇತ್ತು.
ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ,
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.