ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
Cross references
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!