ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
Cross references
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.