ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
Cross references
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.