ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
Cross references
ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.