ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
Cross references
ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.
ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.