ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
Cross references
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.