ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
Cross references
ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ