ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
Cross references
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.