ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
Cross references
ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.
ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು