ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
Cross references
ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.