ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
Cross references
ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು.
ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ
ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.