ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
Cross references
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;