ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
Cross references
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.