ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
Cross references
ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.