ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
Cross references
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.
ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.
ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.