ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
Cross references
ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು
ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.