ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
Cross references
ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.