ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
Cross references
ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.