ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
Cross references
ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.