ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
Cross references
ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.
ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.
ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.