2 ಸಮುವೇಲ 14:29 · ಕನ್ನಡ ಬೈಬಲ್
ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
Cross references
2 ಸಮುವೇಲ 14:30
ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
ಎಸ್ತೇರ್ 1:12
ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
ಮತ್ತಾಯ 22:3
ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.