ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
Cross references
ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ
ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.