Home Bibles 2 ಸಮುವೇಲ 15:2 · ಕನ್ನಡ ಬೈಬಲ್
2 ಸಮುವೇಲ 15:2 · ಕನ್ನಡ ಬೈಬಲ್

ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.

Cross references

ನಿರ್ಗಮಕಾಂಡ 18:14

ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.

ನಿರ್ಗಮಕಾಂಡ 18:16

ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.

ನಿರ್ಗಮಕಾಂಡ 18:26

ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.

ದ್ವಿತೀಯೋಪದೇಶಕಾಂಡ 17:8

ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ

ರೂತ 4:1

ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.

2 ಸಮುವೇಲ 19:8

ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.

1 ಅರಸುಗಳು 3:16

ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.

2 ದಿನವೃತ್ತಾಂತ 10:7

ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.

ಯೋಬ 24:14

ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.

ಸಾಮೇತಿಗಳು 4:16

ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.

ದಾನಿಯೇಲ 11:21

ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.

ಮತ್ತಾಯ 27:1

ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

Interlinear

Choose Theme